ಜಮ್ಮು-ಕಾಶ್ಮೀರ: ಗುಂಡಿಕ್ಕಿ ಟ್ರಕ್ ಡ್ರೈವರ್ ಹತ್ಯೆಗೈದ ಉಗ್ರರು,ಸೇಬು ಮಾಲೀಕನಿಗೆ ಥಳಿತ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಸೇಬುಗಳನ್ನು ಸಾಗಿಸಲಾಗುತ್ತಿದ್ದ ಟ್ರಕ್ ಡ್ರೈವರ್ ನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಮ್ಮು- ಕಾಶ್ಮೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಸೇಬುಗಳನ್ನು ಸಾಗಿಸಲಾಗುತ್ತಿದ್ದ ಟ್ರಕ್ ಡ್ರೈವರ್ ನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಉಗ್ರರು ಪಾಕಿಸ್ತಾನದವರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಮೃತನನ್ನು ಶರೀಫ್  ಖಾನ್ ಎಂದು ಗುರುತಿಸಲಾಗಿದೆ. ಶಿರ್ಮಾಲ್  ಹಳ್ಳಿಯಲ್ಲಿ ಉಗ್ರರು ಈ ದಾಳಿ ನಡೆಸಿದ್ದಾರೆ. ಸಂವಿಧಾನದ 370ನೇ ವಿಧಿ ರದ್ಧತಿ ನಂತರ 72 ದಿನಗಳ ಕಾಲ ಸಂವಹಾನ ಜಾಲ ಸ್ಥಗಿತಗೊಂಡಿದ್ದ ಕಾಶ್ಮೀರದಲ್ಲಿ ಪೋಸ್ಟ್ ಪೇಯ್ಡ್  ಮೊಬೈಲ್ ಪೋನ್ ಗಳ ಸೇವೆಯನ್ನು ಪುನರ್ ಆರಂಭಿಸಿದ ನಂತರ ಈ ಘಟನೆ ನಡೆದಿದೆ.

ಶರೀಫ್ ಖಾನ್ ನನ್ನು ಹತ್ಯೆಗೈದಿದ್ದರೆ  ಸೇಬು ತೋಟದ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ರಾಜಸ್ತಾನ ನೋಂದಣಿಯ ಟ್ರಕ್ ಗೆ  ಜಮ್ಮುವಿನಲ್ಲಿ ಬೆಂಕಿ ಹಚ್ಚಲಾಗಿದೆ. ಮೃತದೇಹವನ್ನು ಟ್ರಕ್ ನಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com