ರಫೆಲ್ ವಿಮಾನ ಇದ್ದಿದ್ದರೆ ಭಾರತದೊಳಗಿಂದಲೇ ಬಾಲಾಕೋಟ್ ಮೇಲೆ ದಾಳಿ ಮಾಡಬಹುದಾಗಿತ್ತು: ರಾಜನಾಥ್ ಸಿಂಗ್ 

ರಫೆಲ್ ಯುದ್ಧ ವಿಮಾನ ಮೊದಲೇ ಭಾರತೀಯ ವಾಯುಪಡೆಯಲ್ಲಿ ಇರುತ್ತಿದ್ದರೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಉಗ್ರರ ಶಿಬಿರ ತಾಣವನ್ನು ಪ್ರವೇಶಿಸಿ ದಾಳಿ ಮಾಡುವ ಅಗತ್ಯವಿರಲಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on

ಥಾಣೆ: ರಫೆಲ್ ಯುದ್ಧ ವಿಮಾನ ಮೊದಲೇ ಭಾರತೀಯ ವಾಯುಪಡೆಯಲ್ಲಿ ಇರುತ್ತಿದ್ದರೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಉಗ್ರರ ಶಿಬಿರ ತಾಣವನ್ನು ಪ್ರವೇಶಿಸಿ ದಾಳಿ ಮಾಡುವ ಅಗತ್ಯವಿರಲಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.


ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮೀರಾ ಬಯಂದರ್ ಅವರ ಪರವಾರಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಫ್ರಾನ್ಸ್ ನಲ್ಲಿ ಇತ್ತೀಚೆಗೆ ರಫೆಲ್ ಯುದ್ಧ ವಿಮಾನವನ್ನು ಬರಮಾಡಿಕೊಳ್ಳುವಾಗ ಆಯುಧ ಪೂಜೆಯ ಶಾಸ್ತ್ರಗಳನ್ನು ನೆರವೇರಿಸಿದ್ದನ್ನು ಸಮರ್ಥಿಸಿಕೊಂಡರು.


ಭಾರತೀಯ ವಾಯುಪಡೆಯಲ್ಲಿ ಮೊದಲೇ ರಫೆಲ್ ಯುದ್ಧ ವಿಮಾನವಿರುತ್ತಿದ್ದರೆ ಬಲಾಕೋಟ್ ನೊಳಗೆ ಪ್ರವೇಶಿಸಿ ವಾಯುದಾಳಿ ನಡೆಸುವ ಅಗತ್ಯವಿರಲಿಲ್ಲ. ಭಾರತದೊಳಗೆ ಕುಳಿತಲ್ಲಿಂದಲೇ ಬಾಲಾಕೋಟ್ ಮೇಲೆ ದಾಳಿ ನಡೆಸಿ ಉಗ್ರರ ತಾಣವನ್ನು ಹೊಡೆದುರುಳಿಸಬಹುದಾಗಿತ್ತು ಎಂದರು.


ರಫೆಲ್ ಯುದ್ಧ ವಿಮಾನವನ್ನು ಭಾರತ ಖರೀದಿಸಿದ್ದು ಆತ್ಮ ರಕ್ಷಣೆಗೆ ಹೊರತು ಬೇರೆ ದೇಶಗಳ ಮೇಲೆ ಜಿದ್ದಿನಿಂದಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com