ಪತ್ನಿಗೆ ವಿಚ್ಛೇದನ ನೀಡಿ, ಕಾಲೇಜು ವಿದ್ಯಾರ್ಥಿನಿ ಹಿಂದೆ ಬಿದ್ದು ಮದುವೆಗೆ ಪೀಡಿಸಿ ಚಾಕು ಇರಿದ ಪಾಗಲ್ ಪ್ರೇಮಿ!

ಪಶ್ಚಿಮ ಗೋದಾವರಿ ಜಿಲ್ಲೆಯ ಪೊಡುರು ಮಂಡಲದ ಕವಿತಂ ಗ್ರಾಮದಲ್ಲಿ ಬುಧವಾರ ವ್ಯಕ್ತಿಯೊಬ್ಬರು ಕಾಲೇಜು ವಿದ್ಯಾರ್ಥಿನಿಯನ್ನು ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಏಲೂರು: ಪಶ್ಚಿಮ ಗೋದಾವರಿ ಜಿಲ್ಲೆಯ ಪೊಡುರು ಮಂಡಲದ ಕವಿತಂ ಗ್ರಾಮದಲ್ಲಿ ಬುಧವಾರ ವ್ಯಕ್ತಿಯೊಬ್ಬರು ಕಾಲೇಜು ವಿದ್ಯಾರ್ಥಿನಿಯನ್ನು ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.


ಕೃತ್ಯದ ನಂತರ ಆತ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಕೀಟನಾಶಕವನ್ನು ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುಧಾಕರ್ ರೆಡ್ಡಿ ವಿವಾಹಿತ ವ್ಯಕ್ತಿಯಾಗಿದ್ದು, ಪತ್ನಿಗೆ ವಿಚ್ಛೇದನ ನೀಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಆರೋಪಿ, ಕೊವ್ವುರಿ ತೇಜಶ್ರೀ(20) ಗೆ ಕಿರುಕುಳ ನೀಡುತ್ತಿದ್ದ.  ಮದುವೆಯಾಗುವಂತೆ  ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ದುರ್ಘಟನೆ ನಡೆದ ಸಂದರ್ಭದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ತೇಜಶ್ರೀ ಮೇಲೆರಗಿದ ತಲೆ ಮತ್ತು ತೋಳುಗಳ ಮೇಲೆ ಕತ್ತಿಯಿಂದ ದಾಳಿ ಮಾಡಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದ ಆಕೆಯನ್ನು ಪಾಲಕೋಲುವಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಉತ್ತಮ ಚಿಕಿತ್ಸೆಗಾಗಿ ಆಕೆಯನ್ನು ಕಾಕಿನಾಡದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಏತನ್ಮಧ್ಯೆ, ಕೀಟನಾಶಕವನ್ನು ಸೇವಿಸಿದ ಆರೋಪಿ ಸುಧಾಕರ್ ರೆಡ್ಡಿ ಅವರನ್ನು ಚೇತರಿಸಿಕೊಳ್ಳುತ್ತಿದ್ದ ಪಾಲಕೊಲ್ಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com