ಆರ್ಥಿಕ ಕುಸಿತ: ಕಾಂಗ್ರೆಸ್ ಪ್ರಣಾಳಿಕೆ ಕದಿಯುವಂತೆ ಪ್ರಧಾನಿ ಮೋದಿಗೆ ರಾಹುಲ್ ಸಲಹೆ

ದೇಶದ ಆರ್ಥಿಕ ಕುಸಿತ ಕುರಿತಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕದಿಯುವಂತೆ ಸಲಹೆ ನೀಡಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ದೇಶದ ಆರ್ಥಿಕ ಕುಸಿತ ಕುರಿತಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕದಿಯುವಂತೆ ಸಲಹೆ ನೀಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಟೀಕಿಸಿರುವ ರಾಹುಲ್ ಅವರು, ದೇಶದ ಆರ್ಥಿಕತೆ ಮುಳುಗಿ ಹೋಗಿದ್ದರೂ, ಕೇಂದ್ರದ ಬಿಜೆಪಿ ನೇತೃತ್ವ ಸರ್ಕಾರಕ್ಕೆ ಮಾತ್ರ ಈ ಬಗ್ಗೆ ಸುಳಿವೇ ಇಲ್ಲದಂತಾಗಿದೆ. ಆರ್ಥಿಕ ಅವ್ಯವಸ್ಥೆಯನ್ನು ಸರಿಪಡಿಸಲು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕದಿಯಿರಿ ಎಂದು ಹೇಳಿದ್ದಾರೆ. 

ಭಾರತದ ಗ್ರಾಮೀಣ ಭಾಗದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ದೇಶದ ಆರ್ಥಿಕ ಸ್ಥಿತಿ ಕುಸಿದು ಬಿದ್ದಿದೆ. ಏನು ಮಾಡಬೇಕೆಂಬುದು ಸರ್ಕಾರಕ್ಕೆ ತಿಳಿಯದಂತಾಗಿದೆ. ಪ್ರಧಾನಿ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕದಿಯಿರಿ. ಪ್ರಣಾಳಿಕೆಯಲ್ಲಿ ಆರ್ಥಿಕ ಕುಸಿತ ಸರಿಪಡಿಸಿರುವ ಕುರಿತು ಯೋಜನೆಗಳ ಬಗ್ಗೆ ತಿಳಿಸಿದ್ದೇವೆಂದು ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com