ಕಮಲೇಶ್ ತಿವಾರಿ
ಕಮಲೇಶ್ ತಿವಾರಿ

ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿ ಬಂಧನ

ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
Published on

ನಾಗ್ಪುರ: ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. 

ಉತ್ತರಪ್ರದೇಶ ಪೊಲೀಸರು ನೀಡಿದ್ದ ಮಾಹಿತಿ ಮೇರೆಗೆ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಬಂಧಿತ ವ್ಯಕ್ತಿಯ ಹೆಸರನ್ನು ಹಾಗೂ ಈ ಕುರಿತ ಮಾಹಿತಿಯನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. 

ಹಿಂದೂ ಸಮಾಜ ಪಕ್ಷದ ನಾಯಕರಾಗಿದ್ದ ತಿವಾರಿಯವರನ್ನು ಕೆಲ ದಿನಗಳ ಹಿಂದಷ್ಟೇ ಲಖನೌನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಈವರೆಗೂ ಐವರನ್ನು ಬಂಧನಕ್ಕೊಳಪಡಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com