ಸಂಚಾರಿ ನಿಯಮ ಉಲ್ಲಂಘನೆ: ಪುದುಚೇರಿ ಸಿಎಂ - ಗವರ್ನರ್​ ನಡುವೆ ಟ್ವೀಟ್​ ವಾರ್, ಏಟು-ಎದಿರೇಟು!

ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ​. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್​ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್​ ವಾರ್ ನಡೆದಿದೆ.
ನಾರಾಯಣಸ್ವಾಮಿ - ಕಿರಣ್ ಬೇಡಿ
ನಾರಾಯಣಸ್ವಾಮಿ - ಕಿರಣ್ ಬೇಡಿ
Updated on

ಪುದುಚೇರಿ: ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ​. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್​ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್​ ವಾರ್ ನಡೆದಿದೆ.

ಸಿಎಂ ನಾರಾಯಣಸ್ವಾಮಿ ಅವರು ಚುನಾವಣಾ ಪ್ರಚಾರದ ಬೈಕ್​ ರ‍್ಯಾಲಿ ವೇಳೆ ಹೆಲ್ಮೆಟ್ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್​ ಬೇಡಿ ಅವರು ಆರೋಪಿಸಿದರೆ, ಇನ್ನೊಬ್ಬರಿಗೆ ಬೋಧನೆ ಮಾಡುವ ಬದಲು ಅದನ್ನು ಅಳವಡಿಸಿಕೊಳ್ಳಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸಿದ ಸಿಎಂ ನಾರಾಯಣಸ್ವಾಮಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕಿರಣ್​ ಬೇಡಿಯವರು ಪುದುಚೇರಿಯ ಪೊಲೀಸ್​ ಮಹಾ ನಿರ್ದೇಶಕರಾದ ಬಾಲಾಜಿ ಶ್ರೀವಾಸ್ತವ ಅವರಿಗೆ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್​ ಹಾಗೂ ಮದ್ರಾಸ್​ ಹೈಕೋರ್ಟ್​ ಕಾಯಿದೆ ಬಗ್ಗೆ ಸ್ಪಷ್ಟವಾಗಿ ಹೇಳಿದ್ದರೂ ಸಿಎಂ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com