ಐಎನ್‌ಎಕ್ಸ್ ಮೀಡಿಯಾ: ಚಿದಂಬರಂ ಇಡಿ ಕಸ್ಟಡಿ ಅಕ್ಟೋಬರ್ 30ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.
ಪಿ ಚಿದಂಬರಂ
ಪಿ ಚಿದಂಬರಂ
Updated on

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಚಿದಂಬರಂ ಅವರನ್ನು ಇಡಿ ಪ್ರಶ್ನಿಸಲು ಅವಕಾಶ ನೀಡಿದ್ದು ಯಾವುದೇ ವೈದ್ಯಕೀಯ ತೊಂದರೆಗಳಿದ್ದಲ್ಲಿ ತಕ್ಷಣ ಅವರನ್ನು ಏಮ್ಸ್ ಗೆ ಕರೆದೊಯ್ಯಬೇಕೆಂದು ಆದೇಶಿಸಿದ್ದಾರೆ.

ಅದಲ್ಲದೆ ಇದುವರೆಗಿನಂತೆಯೇ ಮುಂದೆಯೂ ಸಹ ಚಿದಂಬರಂ ಅವರ ಬಂಧನದಲ್ಲಿನ ಷರತ್ತುಗಳು ಹಾಗೆಯೇ ಮುಂದುವರಿಯಲಿದ್ದು ಅವರಿಗೆ ಮನೆಯಿಂದ ಬೇಯಿಸಿದ ಆಹಾರ ನೀಡುವುದು ಸಹ ಸೇರಿದೆ ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೆ ಮುನ್ನ ತನಿಖಾ ಸಂಸ್ಥೆ ಹಿರಿಯ ಕಾಂಗ್ರೆಸ್ ನಾಯಕನ ವಿಚಾರಣೆಗಾಗಿ ಏಳು ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ ಗೆ ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com