ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ತಿವಾರಿ ಪತ್ನಿ ಆಯ್ಕೆ

ಹಿಂದು ಸಮಾಜ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿಯವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 
ಕಿರಣ್ ತಿವಾರಿ
ಕಿರಣ್ ತಿವಾರಿ
Updated on

ಲಖನೌ: ಹಿಂದು ಸಮಾಜ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿಯವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 

ಅ.18ರಂದು ಕಮಲೇಶ್ ತಿವಾರಿಯವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಗುಂಡಿನ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ತಿವಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದೆಯಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಘಟನೆ ಲಖನೌನ್ನು ಬೆಚ್ಚಿಬೀಳಿಸಿದೆ. 

ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಿರಣ್ ತಿವಾರಿಯವರು ಶೀಘ್ರದಲ್ಲಿಯೇ ಸುದ್ದಿಗೋಷ್ಟಿ ನಡೆಸಿ ಮಾತನಾಡಲಿದ್ದಾರೆಂದು ಮೂಲಗಳು ತಿಳಿಸಿವೆ. ಸುದ್ದಿಗೋಷ್ಟಿಯಲ್ಲಿ ಪತಿಯ ಹತ್ಯೆ ಪ್ರಕರಣ ಕುರಿತಂತೆ ಕಿರಣ್ ಅವರು ಏನು ಮಾತನಾಡುತ್ತಾರೆಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. 

ಇನ್ನು ಕಮಲೇಶ್ ತಿವಾರಿಯವರ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com