ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಕಲ್ಲು ತೂರಾಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ: ವಾರದಲ್ಲಿ 2ನೇ ಘಟನೆ
ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಕಲ್ಲು ತೂರಾಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ: ವಾರದಲ್ಲಿ 2ನೇ ಘಟನೆ

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಕಲ್ಲು ತೂರಾಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ: ವಾರದಲ್ಲಿ 2ನೇ ಘಟನೆ  

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. 
Published on

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. 

ವಾರದಲ್ಲಿ ಎರಡನೇ ಘಟನೆ ಇದಾಗಿದ್ದು, ತೋಟದಲ್ಲಿ ಅವಿತಿದ್ದ ಯುವಕನೋರ್ವ ಈ ಕೃತ್ಯ ಎಸಗಿದ್ದಾನೆ. ಗಾಯಗೊಂಡ ವ್ಯಕ್ತಿ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಲೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದು, ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದಕ್ಕೂ ಮುನ್ನ ಆ.25 ರಂದು ನೂರ್ ಅಹ್ಮದ್ ಟ್ರಕ್ ಡ್ರೈವರ್ ಕಲ್ಲು ತೂರಾಟದಿಂದ ಮೃತಪಟ್ಟಿದ್ದರು. ಭೀಜ್‌ಬೆರಾ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಘಟನೆ ಬಗ್ಗೆ ಮಾಹಿತಿ ನೀಡಿದ್ದ ಪೊಲೀಸರು ಟ್ರಕ್ ನ್ನು ಸೇನಾ ವಾಹನ ಎಂದು ಭಾವಿಸಿದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com