ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಕಾರ

ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ...
ಪಿ.ಚಿದಂಬರಂ
ಪಿ.ಚಿದಂಬರಂ
Updated on

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. 

ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಈ ಹಿಂದೆ ಚಿದಂಬರಂ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಪೀಠ, ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ ಎಂದು ತಿಳಿಸಿದೆ. 

ಆರ್ಥಿಕ ಅಪರಾಧ ಪ್ರಕರಣಗಳು ವಿವಿಧ ಆಯಾಮಗಳನ್ನು ಹೊಂದಿರುತ್ತವೆ. ಹಣಕಾಸು ಅವ್ಯವಹಾರಗಳ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ನೀಡುವುದರಿಂದ ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ವಿಚಾರಣಾ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com