ಭೋಪಾಲ್: ಕ್ಲಾಸ್ ಮುಗಿದ ಬಳಿಕ ನಿರ್ಜನ ಪ್ರದೇಶಕ್ಕೆ ತೆರಳಿದ್ದ ಗೆಳೆಯನೊಬ್ಬ ಗೆಳತಿ ಕಿಸ್ ಮಾಡಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಂದಿರುವ ದಾರುಣ ಘಟನೆ ನಡೆದಿದೆ.
ಮಧ್ಯಪ್ರದೇಶದ ಜಬಲಾಪುರ ಜಿಲ್ಲೆಯ ಬಿಜಾಪುರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ರಮಣ್ ಸಿಂಗ್ ಎಂಬಾತ 18 ವರ್ಷದ ಗೆಳತಿಯನ್ನು ಕೊಲೆ ಮಾಡಿದ್ದು ಈ ಸಂಬಂಧ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಗೆಳತಿಯನ್ನು ಕಾಡಿಗೆ ಕರೆದುಕೊಂಡು ಹೋಗಿದ್ದ ರಮಣ್ ಸಿಂಗ್ ಆಕೆಗೆ ಮುತ್ತು ಕೊಡಲು ಮುಂದಾಗಿದ್ದಾನೆ. ಆಗ ಗೆಳತಿ ಇದಕ್ಕೆ ನಿರಾಕರಿಸಿದ್ದು ಆತನನ್ನು ದೂರು ತಳ್ಳಿದ್ದಾಳೆ. ಇದರಿಂದ ಕೋಪಗೊಂಡ ರಮಣ್ ಸಿಂಗ್ ಆಕೆಯನ್ನು ಜೋರಾಗಿ ದೂಡಿದ್ದಾನೆ. ಪರಿಣಾಮ ಆಕೆಯ ತಲೆ ಬಂಡೆಗೆ ತಗುಲಿದೆ.
ಕೂಡಲೇ ಆಕೆ ಪ್ರಜ್ಞೆ ತಪ್ಪಿದ್ದರಿಂದ ಗಾಬರಿಗೊಂಡ ರಮಣ್ ಮುಂದೇನು ಮಾಡಬೇಕು ಎಂದು ತೋಚದೆ ಆಕೆಯ ದೇಹವನ್ನು ಎಲೆಗಳಿಂದ ಮುಚ್ಚಿ ಮನೆಗೆ ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ತನಿಖೆಗೆ ಕೈಗೊಂಡ ಪೊಲೀಸರಿಗೆ ಇದೀಗ ಆರೋಪಿ ರಮಣ್ ಸಿಂಗ್ ನಡೆದ ಘಟನೆಯನ್ನು ವಿವರಿಸಿದ್ದಾನೆ.
Advertisement