ವಾಯುಮಾಲಿನ್ಯ ತಡೆಗೆ ಮತ್ತೆ ದೆಹಲಿಯಲ್ಲಿ ಸಮ-ಬೆಸ ಸಂಚಾರಕ್ಕೆ ಚಾಲನೆ: ಸಿಎಂ ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ನಿಯಂತ್ರಿಸಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ. 

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜಧಾನಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಸಮಸ್ಯೆ ನಿವಾರಣೆಗಾಗಿ ಮತ್ತೆ ಸಮ-ಬೆಸ ಸಂಚಾರ ವ್ಯವಸ್ಥೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 

ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು 7 ಅಂಶಗಳ ಕ್ರಿಯಾ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ವ್ಯವಸ್ಥೆ ನವೆಂಬರ್ 4ರಿಂದ 15ವರೆಗೂ ಚಾಲ್ತಿಯಲ್ಲಿರಲಿದೆ ಎಂದು ಹೇಳಿದ್ದಾರೆ. 

ಚಳಿಗಾಲದಲ್ಲಿ ಜನತೆಯನ್ನು ಕಾಡುವ ವಾಯುಮಾಲಿನ್ಯ ಅಪಾಯದ ಮಟ್ಟ ತಲುಪುತ್ತದೆ. ಈ ಹಿನ್ನಲೆಯಲ್ಲಿ ನವೆಂಬರ್ ಆರಂಭದಿಂದಲೇ ಸಮ-ಬೆಸ ಸಂಖ್ಯೆಯ ವಾಹನ ಸಂಚಾರವನ್ನು ಪುನಾರಾರಂಭಿಸಲಾಗುವುದು. ವಾಯುಮಾಲಿನ್ಯವನ್ನು ಪ್ರತೀನಿತ್ಯ ಪರಿಶೀಲನೆ ನಡೆಸುತ್ತಿರುವ ಏಕೈಕ ರಾಜ್ಯವೆಂದರೆ ಅದು ದೆಹಲಿ ಮಾತ್ರ. ಸಮ-ಬೆಸ ನಿಯಮವನ್ನು ಇದು ಮೂರನೇ ಬಾರಿಗೆ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈ ಹಿಂದೆ ಕೂಡ ಸಮ-ಬೆಸ ಸಂಖ್ಯೆಗಳ ವಾಹನ ಸಂಚಾರ ಕುರಿತು ಕೇಜ್ರಿವಾಲ್ ಅವರು ಯೋಜನೆ ರೂಪಿಸಿದ್ದರು, ಆದರೆ, ಈ ಸಂಬಂಧ ಅನೇಕ ಭಿನ್ನಾಭಿಪ್ರಾಯಗಳಿಂದ ಯೋಜನೆ ಸ್ಧಗಿತಗೊಂಡಿತ್ತು. 

2016ರಲ್ಲಿ ಮೊದಲ ಬಾರಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಸಮಸಂಖ್ಯೆಯ ನಂಬರ್ ಹೊಂದಿದಂತಹ ವಾಹನಗಳು ಪರ್ಯಾಯ ದಿನ ಸಂಚಾರ ಮಾಡುವ ಈ ಯೋಜನೆ ವಿವಾದಕ್ಕೆ ಕಾರಣವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com