ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ದೆಹಲಿಗೆ ಆಗಮಿಸದಂತೆ ಅಭಿಮಾನಿಗಳು,ಕಾರ್ಯಕರ್ತರಿಗೆ ಡಿಕೆ ಸುರೇಶ್ ಮನವಿ

ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿ. ಕೆ. ಸುರೇಶ್ ಮನವಿ ಮಾಡಿದ್ದಾರೆ.
Published on

ನವದೆಹಲಿ:ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿ. ಕೆ. ಸುರೇಶ್ ಮನವಿ ಮಾಡಿದ್ದಾರೆ.

ಜ್ವರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರನ್ನು ನೋಡಲು ಪದೇ ಪದೇ ದೆಹಲಿಗೆ ಆಗಮಿಸದಂತೆ ಡಿಕೆಶಿ ಅಭಿಮಾನಿಗಳಿಗೆ ಡಿ. ಕೆ. ಸುರೇಶ್ ವಿನಂತಿ ಮಾಡಿದ್ದಾರೆ.

ಅಭಿಮಾನಿಗಳು ಪದೇ ಪದೇ ದೆಹಲಿಗೆ ಶಿವಕುಮಾರ್ ಅವರನ್ನು ನೋಡಲು ಬರುತ್ತಿರುವುದರಿಂದ ಬೇರೆ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿಯೂ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗುತ್ತದೆ. ಈ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಊರುಗಳಲ್ಲೇ ಇರಬೇಕು ಎಂದು ಡಿ ಕೆ ಸುರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com