ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಅ.12-14 ವರೆಗೆ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶವನ್ನು 2020 ಕ್ಕೆ ಮುಂದೂಡಲಾಗಿದೆ.
ರಾಜ್ಯಪಾಲ ಸತ್ಯಪಾಲ್ ಮಲೀಕ್ ನೇತೃತ್ವದಲ್ಲಿ ನಡೆದ ರಾಜ್ಯ ಆಡಳಿತ ಮಂಡಳಿ (ಎಸ್ಎಸಿ) ಸಭೆಯಲ್ಲಿ ಹೂಡಿಕೆದಾರರ ಸಮಾವೇಶವನ್ನು ಮುಂದೂಡುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಹೂಡಿಕೆದಾರರ ಸಮಾವೇಶದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಸಿದ್ಧತೆಯ ಹಂತವನ್ನು ನೋಡಿ ಹೂಡಿಕೆದಾರರ ಸಮಾವೇಶವನ್ನು ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಕೇಂದ್ರ ಸರ್ಕಾರದ ಜೊತೆ ಸಮಾಲೋಚನೆ ನಡೆಸಿ ನಿಗದಿಪಡಿಸಲಾಗುತ್ತದೆ.
ಎಸ್ಎಸಿ ನಿರ್ಣಯದಿಂದ ಶೃಂಗಸಭೆಯಲ್ಲಿ ಹೂಡಿಕೆದಾರರನ್ನು ಆಕರ್ಷಿಸುವುದಕ್ಕೆ ಕೈಗಾರಿಕೆ ಹಾಗೂ ವಾಣಿಜ್ಯ (ಐ&ಸಿ) ಇಲಾಖೆಗೆ ಮತ್ತಷ್ಟು ಸಮಯ ದೊರೆತಂತಾಗಿದೆ.
Advertisement