ನವದೆಹಲಿ: ಒಲಂಪಿಕ್ ನ ಪದಕ ವಿಜೇತ ಕುಸ್ತಿ ಪಟು ಹಾಗೂ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಬ್ಬರು ಕ್ರೀಡಾಪಟುಗಳೊಂದಿಗೆ ಅಕಾಲಿ ದಳ ಶಾಸಕ ಬಲ್ಕೌರ್ ಸಿಂಗ್ ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ. 60 ಕೆಜಿ ವಿಭಾಗದಲ್ಲಿ 2012 ರ ಸಮ್ಮರ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಹರ್ಯಾಣ ಮೂಲದ ಯೋಗೇಶ್ವರ್ ದತ್ ಪ್ರಧಾನಿ ನರೇಂದ್ರ ಮೋದಿ ನೀತಿಗಳಿಂದ ಪ್ರಭಾವಿತರಾಗಿ ರಾಜಕೀಯಕ್ಕೆ ಬಂದಿದ್ದಾರೆ.
ರಾಜಕೀಯದಲ್ಲಿ ಒಳ್ಳೆಯದನ್ನು ಮಾಡಬಹುದೆಂಬುದನ್ನು ಮೋದಿ ತೋರಿಸಿಕೊಟ್ಟಿದ್ದಾರೆ ಎಂದು ಯೋಗೇಶ್ವರ್ ದತ್ ಹೇಳಿದ್ದಾರೆ. ಇನ್ನು ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ಮಾತನಾಡಿದ್ದು, ಕ್ರೀಡೆಯಲ್ಲಿ ದೇಶಸೇವೆ ಮಾಡಿದ ನಂತರ ರಾಜಕೀಯವಾಗಿ ದೇಶಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.
Advertisement