ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳನ್ನು ರಕ್ಷಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
Updated on

ನವದೆಹಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿಗೆ ಬೆಂಬಲ ನೀಡಿ ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿಯನ್ನು ತಡೆಯುವ ಮೂಲಕ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಪ್ರಿಯಾಂಕಾ ದೂರಿದ್ದಾರೆ.

ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದ ಶಹಜಹಾನಪುರವನ್ನು ಸುತ್ತಲೂ ಬ್ಲಾಕ್  ಮಾಡಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರನ್ನು ವಶಕ್ಕೆ ಪಡೆಯಲಾಗಿದೆ, 

ಬಂಧಿತ ಕಾನೂನು ವಿದ್ಯಾರ್ಥಿನಿ ಬೆಂಬಲಿಸಿ  ಸೋಮವಾರ ನ್ಯಾಯ ಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ಮುಖಂಡರಾದ ಜಿತಿನ್ ಪ್ರಸಾದ್ ಮತ್ತು ಕೌಶಲ್ ಮಿಶ್ರಾ ನಿರ್ಧರಿಸಿದ್ದರು. ಆದರೆ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಹೇಳಲಾಗಿದೆ.

ಬೆಳಗ್ಗೆ 10 ಗಂಟೆ ವೇಳೆಗೆ ನನ್ನ ಮನೆಗೆ ಪೊಲೀಸರನ್ನು ನಿಯೋಜಿಸಲಾಗಿತ್ತ, ಉತ್ತರ ಪ್ರದೇಶ ಕಾಶ್ಮೀರವಲ್ಲ, ಸಂತ್ರಸ್ತೆ ಪರವಾಗಿ ನಡೆಯಬೇಕಿದ್ದ ಪ್ರತಿಭಟನಾ ರ್ಯಾಲಿಯನ್ನು ತಡೆಗಟ್ಟಿ ನಮ್ಮ ಮೂಲಭೂತ ಸ್ವಾತಂತ್ರ್ಯ ಹತ್ತಿಕ್ಕುತ್ತಿದ್ದ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com