ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಈ ಎರಡು ಸಂಘಟನೆಗಳನ್ನು ನಿಷೇಧಿಸಿತ್ತು. ಇದೀಗ ಆ ಸಂಘಟನೆಗಳ ಮೇಲಿನ ನಿಷೇಧ ಪರಿಶೀಲಿಸಲು ದೆಹಲಿ ಹೈಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್ ನೇತೃತ್ವದಲ್ಲಿ ನ್ಯಾಯಾಧೀಕರಣ ರಚಿಸಿದ್ದು, ಜಮಾತ್-ಇ-ಇಸ್ಲಾಮಿ, ಜೆಕೆಎಲ್ಎಫ್ ನಿಷೇಧಕ್ಕೆ ಸಕಾರಣವಿದೆಯೇ ಎಂಬ ಕುರಿತು ನಿರ್ಧರಿಸಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.