ಮೂಲಗಳ ಪ್ರಕಾರ ಬನಾರಸ್ ವಿವಿಯ ಕ್ಯಾಂಪಸ್ ಒಳಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಹಾಸ್ಟೆಲ್ ನ ಗೇಟ್ ಬಳಿ ನಿಂತಿದ್ದ ಗೌರವ್ ಮೇಲೆ ಅನಾಮಿಕ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ತಕ್ಷಣವೇ ಅವರನ್ನು ವಿಶ್ವವಿದ್ಯಾಲಯದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಗೌರವ್ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.