ಏಪ್ರಿಲ್ 6ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಬಿಜೆಪಿಯ ನಿಲುವುಗಳ ಬಗ್ಗೆ ತಮ್ಮ ಬ್ಲಾಗ್ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದ ಅಡ್ವಾಣಿ ಅವರು, ವೈವಿಧ್ಯತೆ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯವನ್ನು ಗೌರವಿಸುವುದು ಭಾರತೀಯ ಪ್ರಜಾಪ್ರಭುತ್ವದ ಸಾರ, ಬಿಜೆಪಿ ಸ್ಥಾಪನೆಯಾದ ದಿನದಿಂದಲೂ, ತನ್ನ ರಾಜಕೀಯ ವಿರೋಧಿಗಳನ್ನು ಶತ್ರುಗಳೆಂದು ಭಾವಿಸಿಲ್ಲ, ಬದಲಾಗಿ ಎದುರಾಳಿಗಳೆಂದಷ್ಟೇ ಪರಿಗಣಿಸಿದೆ ಎಂದು ಹೇಳಿದ್ದಾರೆ.