ನವದೆಹಲಿ: ಭಾರತೀಯ ಸೇನೆಯನ್ನು "ಮೋದಿ ಸೇನೆ" ಎಂದು ಕರೆದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಆಯೋಗ ಯೋಗಿ ಅವರಿಗೆ ಪತ್ರ ಬರೆದು ಎಚ್ಚರಿಸಿದೆ. ಆದರೆ ಚುನಾವಣಾ ಆಯೋಗದ ಈ ಮೃದು ನಡೆಯನ್ನು ಟೀಕಿಸಿದ ಕಾಂಗ್ರೆಸ್ ಯೋಗಿ ಆದಿತ್ಯನಾಥ್ ಭಾರತೀಯ ಸೇನೆಗೆ ಅವಮಾನ ಮಾಡಿದ್ದಾರೆ. ಆದರೆ ಚುನಾವಣಾ ಆಯೋಗ ಅವರಿಗೆ 'ಪ್ರೇಮ ಪತ್ರ' ಬರೆದಿದೆ ಎಂದು ಟೀಕಿಸಿದೆ.