ಈ ಬಗ್ಗೆ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ನಿಜಕ್ಕೂ ಇದು ಸರಿಯಾದ ನಡೆಯಲ್ಲ. ಕಾಶ್ಮೀರಿಗಳ ಮೂಲಭೂತ ಹಕ್ಕುಗಳನ್ನು ಈ ರೀತಿಯ ನೆಪವೊಡ್ಡಿ ತಡೆ ಹಿಡಿಯಲಾಗದು. ಇದು ನಮ್ಮ ರಾಜ್ಯ, ನಮ್ಮ ನೆಲ.. ನಮ್ಮ ರಸ್ತೆಗಳನ್ನು ಬಳಕೆ ಮಾಡಲೂ ಕೂಡ ನಾವು ಅನುಮತಿ ಪಡೆಯಬೇಕೆ..? ಎಂದು ಕಿಡಿಕಾರಿದ್ದಾರೆ.