ನವದೆಹಲಿ: ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ನಿರ್ದೇಶನದಂತೆ ಸಂಧಾನ ಸಮಿತಿ ರಚನೆಯಾಗಿ ಎಂಟು ವಾರಗಳಲ್ಲಿ ಸಂಧಾನ ಸಮಿತಿ ತನ್ನ ತೀರ್ಮಾನ ಹೇಳುವುದರಲ್ಲಿದೆ ಆದರೆ ಈ ನಡುವೆಯೇ ನಿರ್ಮೋಹಿ ಅಖಾಡಾ ವಿವಾದದ ಕುರಿತು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಮಜನ್ಮಭುಮಿ ವಿವಾದಿತ ಜಾಗದ ಸುತ್ತಮುತ್ತಲ ಹೆಚ್ಚುವರಿ ಭೂಮಿಯನ್ನು ಅದರ ಮೂಲ ಮಾಲಿಕರಿಗೆ ನಿಡುವ ಕುರಿತು ಕೇಂದ್ರ ಸರ್ಕಾರ ಕೈಗೊಳ್ಳುತಿರುವ ಕ್ರಮದ ವಿರುದ್ಧ ನಿರ್ಮೋಹಿ ಅಖಾಡಾ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.