ಸಂದರ್ಶನವೊಂದರಲ್ಲಿ ರಾಮ ಮಂದಿರದ ಬಗ್ಗೆ ಮಾತನಾಡಿರುವ ವೀರಭದ್ರ ಸಿಂಗ್, ಭಾರತಕ್ಕೆ ಇಸ್ಲಾಮ್ ಬರುವುದಕ್ಕೂ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು. ಮಂದಿರವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿತ್ತು. ಅಯೋಧ್ಯೆ ರಾಮನ ರಾಜಧಾನಿ, ಮಸೀದಿ ಇದ್ದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹೇಳಿದ್ದಾರೆ.