ನೀವು ಜನರನ್ನು ಶಾಂತಿಯಿಂದ ಇರಲು ಬಿಡುವುದಿಲ್ಲ; ಸುಪ್ರೀಂ ಕೋರ್ಟ್ ಛೀಮಾರಿ

ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನಿರಾಕರಿಸಿದೆ.
ಈ ಸಂಬಂಧ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಈ ದೇಶ ಶಾಂತಿಯಿಂದ ಇರುವುದನ್ನು ನೀವು ಬಯಸುವುದಿಲ್ಲ. ಯಾವಾಗಲೂ ಯಾರಾದರೊಬ್ಬರು ಈ ವಿಷಯದಲ್ಲಿ ಮೂಗು ತೂರಿಸುತ್ತಾರೆ ಎಂದು ಅರ್ಜಿದಾರರಿಗೆ ಛೀಮಾರಿ ಹಾಕಿದೆ. ಅಯೋಧ್ಯೆ ಜನರು ಶಾಂತಿಯಿಂದ ಇರುವುದು ನಿಮಗೆ ಇಷ್ಟವಿಲ್ಲವೇ ಎಂದು ನ್ಯಾಯಾಲಯ ಅರ್ಜಿದಾರರಿಗೆ ಪ್ರಶ್ನಿಸಿದೆ.
ಅಲ್ಲದೆ ಅರ್ಜಿದಾರರಿಗೆ 5 ಲಕ್ಷ ವೆಚ್ಚ ನೀಡಬೇಕೆಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಹಿಂತೆಗೆದುಕೊಳ್ಳಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com