ಉತ್ತರ ಗುಜರಾತ್ ಮತ್ತು ಸೌರಾಷ್ಟ್ರ ಪ್ರಾಂತ್ಯದಲ್ಲಿ ಕಳೆದ 2 ದಿನಗಳಿಂದ ಸುರಿದ ಅಕಾಲಿಕ ಭಾರಿ ಮಳೆ ಹಾಗೂ ಧೂಳು ಸಹಿತ ಚಂಡಮಾರುತ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದ್ದು, ಈವರೆಗೂ ಸುಮಾರು 35 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಂತೆಯೇ ಹಲವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಜಿಬಿ ಮಂಗ್ಲಪಾರಾ ಹೇಳಿದ್ದಾರೆ.