'ನೀವು ದೇಶದ ಪ್ರಧಾನಿ, ಗುಜರಾತ್ ಗೆ ಮಾತ್ರ ಅಲ್ಲ': ಮೋದಿ ತಾರತಮ್ಯಕ್ಕೆ ಕಮಲ್ ನಾಥ್ ಆಕ್ರೋಶ

ಗುಜರಾತ್ ನಲ್ಲಿ ಮಳೆ, ಬಿರುಗಾಳಿ, ಸಿಡಿಲಿನ ಅಬ್ಬರಿಗೆ ಸಿಲುಕಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಕ್ರಮವನ್ನು ಪ್ರಶ್ನಿಸಿದ ಮಧ್ಯ ಪ್ರದೇಶ...
ಕಮಲ್ ನಾಥ್
ಕಮಲ್ ನಾಥ್
ಭೋಪಾಲ್‌: ಗುಜರಾತ್ ನಲ್ಲಿ ಮಳೆ, ಬಿರುಗಾಳಿ, ಸಿಡಿಲಿನ ಅಬ್ಬರಿಗೆ ಸಿಲುಕಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಕ್ರಮವನ್ನು ಪ್ರಶ್ನಿಸಿದ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ನೀವು ಕೇವಲ ಗುಜರಾತ್‌ ಮಾತ್ರ ಪ್ರಧಾನಿ ಅಲ್ಲ. ಇಡೀ ದೇಶಕ್ಕೆ ಪ್ರಧಾನಿ ಎಂದು ಹೇಳಿದ್ದಾರೆ.
ಗುಜರಾತ್‌ ಮಾತ್ರವಲ್ಲದೆ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲೂ ಮಂಗಳವಾರ ಸಂಭವಿಸಿದ್ದ ಅಕಾಲಿಕ ಮಳೆ-ಬಿರುಗಾಳಿ-ಗುಡುಗು-ಸಿಡಿಲು ಬಡಿದು ಹಲವರು ಮೃತಪಟ್ಟಿದ್ದಾರೆ. ಈ ಮೋದಿ ಈ ರಾಜ್ಯಗಳ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದೆ, ಸಂತಾಪ ಸೂಚಿಸದೆ ಕೇವಲ ಗುಜರಾತ್‌ ಬಗ್ಗೆ ಮಾತ್ರವೇ ನೋವು ವ್ಯಕ್ತಪಡಿಸಿ, ಪರಿಹಾರ ಘೋಷಿಸಿದ್ದಾರೆ ಎಂದು ಕಮಲ್ ನಾಥ್ ಟ್ವೀಟ್ ಮಾಡಿದ್ದಾರೆ.
ಗುಜರಾತ್‌ನಲ್ಲಿ ಈ ನೈಸರ್ಗಿಕ ಪ್ರಕೋಪಕ್ಕೆ ಬಲಿಯಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರಕಟಿಸಿರುವ ಮೋದಿ ಇತರ ಮೂರು ರಾಜ್ಯಗಳ ಸಂತ್ರಸ್ತರ ಬಗ್ಗೆ ಏಕೆ ಮೌನ ವಹಿಸಿದ್ದಾರೆ ಎಂದು ಕಮಲ್‌ ನಾಥ್‌ ಪ್ರಶ್ನಿಸಿದ್ದಾರೆ.
ಕಮಲ್ ನಾಥ್ ಟ್ವೀಟ್ ನಿಂದ ಎಚ್ಚೆತ್ತುಕೊಂಡ ಪ್ರಧಾನಿ ಕಾರ್ಯಾಲಯ, ಇತರೆ ಮೂರು ರಾಜ್ಯಗಳ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com