ಚಂದ್ರಬಾಬು ನಾಯ್ಡು ತಿರುಚಿದ ಚಿತ್ರ ಶೇರ್ ಮಾಡಿದ ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ವೈಎಸ್ಆರ್ ಕಾಂಗ್ರೆಸ್ ಸೇರಿದ್ದಾರೆ ಎಂದು ಬರೆದು...
ರಾಮ್ ಗೋಪಾಲ್ ವರ್ಮಾ
ರಾಮ್ ಗೋಪಾಲ್ ವರ್ಮಾ
ಪಶ್ಚಿಮ ಗೋದಾವರಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ವೈಎಸ್ಆರ್ ಕಾಂಗ್ರೆಸ್ ಸೇರಿದ್ದಾರೆ ಎಂದು ಬರೆದು, ಅವರ ತಿರುಚಿದ ಫೋಟೋವನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಈ ಸಂಬಂಧ ಟಿಡಿಪಿ ಕಾರ್ಯಕರ್ತ ದೇವಿಬಾಬು ಚೌಧರಿ ಅವರು ತಡೆಪಳ್ಳಿ ಗುಡೆಮ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ತೆಲಂಗಾಣದಲ್ಲೂ ದೂರು ನೀಡಿದ್ದು, ಚಂದ್ರಬಾಬು ನಾಯ್ಡು ಅವರ ಫೋಟೋವನ್ನು ತಿರುಚುವ ಮೂಲಕ ನಮ್ಮ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಚೌಧರಿ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com