ನನ್ನನ್ನು ಭಯೋತ್ಪಾದಕನ ರೀತಿ ಕಾಣುತ್ತಿದ್ದಾರೆ: ಆಜಂ ಖಾನ್ ಕಣ್ಣೀರು

ನನ್ನನ್ನು ರಾಜ್ಯದ ಆಡಳಿತ ಭಯೋತ್ಪಾದಕನ ರೀತಿ ನೋಡುತ್ತಿದೆ ಎಂದು ಸಮಾಜಾವಾದಿ ಪಕ್ಷದ ನಾಯಕ ಆಜಂ ಖಾನ್ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.
ನನ್ನನ್ನು ಭಯೋತ್ಪಾದಕನ ರೀತಿ ಕಾಣುತ್ತಿದ್ದಾರೆ: ಆಜಂ ಖಾನ್ ಕಣ್ಣೀರು
ನನ್ನನ್ನು ಭಯೋತ್ಪಾದಕನ ರೀತಿ ಕಾಣುತ್ತಿದ್ದಾರೆ: ಆಜಂ ಖಾನ್ ಕಣ್ಣೀರು
ರಾಮ್ ಪುರ: ನನ್ನನ್ನು ರಾಜ್ಯದ ಆಡಳಿತ ಭಯೋತ್ಪಾದಕನ ರೀತಿ ನೋಡುತ್ತಿದೆ ಎಂದು ಸಮಾಜಾವಾದಿ ಪಕ್ಷದ ನಾಯಕ ಆಜಂ ಖಾನ್ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ. 
ಉತ್ತರ ಪ್ರದೇಶದ ರಾಮ್ ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಆಜಂ ಖಾನ್, ನನ್ನನ್ನು ರಾಷ್ಟ್ರವಿರೋಧಿ, ದೇಶದ್ರೋಹಿ ರೀತಿಯಲ್ಲಿ ಕಾಣಲಾಗುತ್ತಿದೆ. ನನ್ನ ಬೆಂಬಲಿಗರ ವಿರುದ್ಧ ತೀವ್ರವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಜಂ ಖಾನ್ ಆರೋಪಿಸಿದ್ದಾರೆ.
ಇದು ಯಾವ ರೀತಿಯ ಪ್ರಜಾಪ್ರಭುತ್ವ? ನನ್ನ ಬೆಂಬಲಿಗರ ಮನೆಗಳಿಗೆ ಬೀಗ ಹಾಕಲಾಗುತ್ತಿದೆ. ನನ್ನ ಬೆಂಬಲಿಗ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಲಾಗಿದೆ ಎಂದು ಆಜಂ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಬಿಜೆಪಿ ಅಭ್ಯರ್ಥಿ ಜಯಪ್ರದ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದ ಆಜಂ ಖಾನ್ ವಿರುದ್ಧ ಕ್ರಮ ಕೈಗೊಂಡಿದ್ದ ಚುನಾವಣಾ ಆಯೋಗ, ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com