ಕೈಗಾರಿಕಾ ಉದ್ದೇಶಕ್ಕಾಗಿ ರೈತರಿಂದ ವಶಪಡಿಸಿಕೊಂಡ ಭೂಮಿಗೆ ನೀಡಿದ್ದ ಪರಿಹಾರದ ಮೊತ್ತದಲ್ಲಿ 35 ಲಕ್ಷ ರೂಪಾಯಿ ವಾಪಸ್ ಪಡೆಯುವುದಾಗಿ ಹರ್ಯಾಣದ ಕೈಗಾರಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮ ರೈತರಿಗೆ ನೊಟೀಸ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ 72 ಗ್ರಾಮದ ಜನತೆ ಚುನಾವಣೆ ಬಹಿಷ್ಕರಿಸಲು ಚಿಂತನೆ ನಡೆಸಿದ್ದಾರೆ.