ನಾಥುರಾಂ ಗೊಡ್ಸೆ ಬದುಕಿದ್ದಿದ್ದರೆ ಆತನಿಗೆ ಬಿಜೆಪಿ ಟಿಕೆಟ್ ನೀಡ್ತಿತ್ತು: ಕಾಂಗ್ರೆಸ್

ಮಲೇಗಾಂವ್ ಸ್ಫೋಟದ ಆರೋಪಿಯಾಗಿದ್ದ ಸಾಧ್ವಿ ಪ್ರಗ್ಯಾ ಠಾಕೂರ್ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿ ಬೆಂಬಲಿಸಿದ್ದು ಇನ್ನು ಮಹಾತ್ಮಾ ಗಾಂಧಿಜೀ...
ಕಾಂಗ್ರೆಸ್
ಕಾಂಗ್ರೆಸ್
ಕಲ್ಯಾಣ್: ಮಲೇಗಾಂವ್ ಸ್ಫೋಟದ ಆರೋಪಿಯಾಗಿದ್ದ ಸಾಧ್ವಿ ಪ್ರಗ್ಯಾ ಠಾಕೂರ್ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿ ಬೆಂಬಲಿಸಿದ್ದು ಇನ್ನು ಮಹಾತ್ಮಾ ಗಾಂಧಿಜೀ ಅವರನ್ನು ಹತ್ಯೆ ಮಾಡಿದ್ದ ನಾಥುರಾಂ ಗೊಡ್ಸೆ ಏನಾದರೂ ಬದುಕಿದ್ದಿದ್ದರೆ ಆತನಿಗೆ ಬಿಜೆಪಿ ಟಿಕೆಟ್ ನೀಡುತ್ತಿತ್ತು ಎಂದು ಕಾಂಗ್ರೆಸ್ ಹೇಳಿದೆ.
ಮಹಾರಾಷ್ಟ್ರದ ಕಲ್ಯಾಣದಲ್ಲಿ ಮಾತನಾಡಿದ ಎಂಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸಚಿನ್ ಸಾವಂತ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಧ್ವಿಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದರು. 
ಅಲ್ಲದೆ ಡಾ. ನರೇಂದ್ರ ದಾಬೋಲ್ಕರ್, ಎಂಎಂ ಕಲಬುರಗಿ, ಗೋವಿಂದ ಪನ್ಸಾರೆ ಮತ್ತು ಗೌರಿ ಲಂಕೇಶ್ ರನ್ನು ಹತ್ಯೆ ಮಾಡಿದವರಿಗೂ ಬಿಜೆಪಿ ಟಿಕೆಟ್ ನೀಡುತ್ತಿತ್ತು ಎಂದು ಹೇಳಿದ್ದಾರೆ. 
ಮುಂಬೈ ದಾಳಿಯಲ್ಲಿ ಹುತಾತ್ಮರಾದ  ಮಹಾರಾಷ್ಟ್ರ ಎ.ಟಿ.ಎಸ್‌. ಮುಖ್ಯಸ್ಥ ಹೇಮಂತ ಕರ್ಕರೆ ಅವರಿಗೆ ನಾನು ಶಾಪ ಹಾಕಿದ್ದೆ. ನನ್ನ ಶಾಪದಿಂದ ಹಾಗೂ ಅವರ ಕರ್ಮದಿಂದ ಮೃತಪಟ್ಟಿದ್ದಾರೆ ಎಂದು ಸಾಧ್ವಿ ಪ್ರಗ್ಯಾ ಠಾಕೂರ್ ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ಸಾವಂತ್ ದೇಶಕ್ಕಾಗಿ ಮಡಿವರ ಕುರಿತು ಅವಹೇಳನವಾಗಿ ಮಾತನಾಡುತ್ತಾರೆ ಅಂತಹವರಿಗೆ ಮತ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೇಳುತ್ತಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com