ಇದು ಸರಿಯಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕರ ಮೇಲೆ ಹಲ್ಲೆ: ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿ ಬಂಧನ!

ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲಡ ಬಸ್
ಕಲ್ಲಡ ಬಸ್
ತಿರುವನಂತಪುರಂ: ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಿರುವನಂತಪುರಂನಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಲಡ ಟ್ರಾವೆಲ್ಸ್ ಅಲ್ಲಪುಜಾ ಬಳಿ ಕೆಟ್ಟು ನಿಂತಿದೆ. ಈ ವೇಳೆ ಮತ್ತೊಂದು ಬಸ್ ನಲ್ಲಿ ಪ್ರಯಾಣಿಕರನ್ನು ವೈತಿಲಾಗೆ ಕರೆತರಲಾಗಿತ್ತು. 
ಇದನ್ನು ಇಬ್ಬರು ಪ್ರಯಾಣಿಕರು ಪ್ರಶ್ನಿಸಿದ್ದರು ಅದಕ್ಕೆ ಬಸ್ ಸಿಬ್ಬಂದಿ ಅವರ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. 
ಸದ್ಯ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಸಿಬ್ಬಂದಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com