ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು, ಮನೆಯಲ್ಲಿ ಕೆಲಸ ಮಾಡುವ ಇಬ್ಬರ ಸಹಾಯದಿಂದಾಗಿ ಶುಕ್ಲಾ, ಗಂಡನ ಸಾವಿನ ಸಂಚು ರೂಪಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಈ ಕುರಿತು ತನಿಖೆಗಾಗಿ ದೆಹಲಿ ಪೊಲೀಸರು ಭಾನುವಾರ ಶುಕ್ಲಾರನ್ನು ವಶಕ್ಕೆ ಪಡೆದಿದ್ದು, ಅವರನ್ನು 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇನ್ನು ರೋಹಿತ್ ಹಾಗೂ ಶುಕ್ಲಾ ನಡುವೆ ಉತ್ತಮ ಸಂಬಂಧವಿರಲಿಲ್ಲ ಎಂದು ಶೇಖರ್ ಅಮ್ಮ ಉಜ್ವಲ ತಿವಾರಿ ಈ ಹಿಂದಿನ ವಿಚಾರಣೆಯಲ್ಲಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಭೋಲು ಮಂಡಲ್ ಎಂಬಾತ ರೋಹಿತ್ ಮೂಗಿನಿಂದ ರಕ್ತ ಸೋರುತ್ತಿತ್ತು ಎಂದು ಈತ ತಿಳಿಸಿದ್ದ.