ಆರ್ ಟಿಐ ನಿಂದ ಈ ಮಾಹಿತಿ ಬಹಿರಂಗವಾಗಿದೆ. ಜನವರಿ ತಿಂಗಳಲ್ಲಿ ವರ್ಲ್ಡ್ ಎಕಾನಾಮಿಕ್ ಫೋರಂ ನಲ್ಲಿ ಭಾಗವಹಿಸಲು ಸ್ವಿಟ್ಜರ್ಲ್ಯಾಂಡ್ ನ ದಾವೋಸ್ ಗೆ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್, ರಾಜ್ಯ ಮುಖ್ಯಕಾರ್ಯದರ್ಶಿ ಎಸ್ ಆರ್ ಮೊಹಂತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅಶೋಕ್ ಬರ್ನ್ವಾಲ್, ಕೈಗಾರಿಕಾ ನೀತಿ ಇಲಾಖೆ ಹಾಗೂ ಹೂಡಿಕೆ ಉತ್ತೇಜನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಲೇಮಾನ್ ತೆರಳಿದ್ದರು.