ಈ ವೇಳೆ ರೈತನ ಕಾಲು ಹಾಗೂ ಬೆನ್ನಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ಪ್ರಾಥಮಿಕ ಚಿಕಿತ್ಸೆ ಪಡೆದು ಹುಷಾರಾಗಿರುವ ನಿರಂಜನ್, ಈ ಬಗ್ಗೆ ಪ್ರತಿಕ್ರಿಯಿಸಿದ್ದು ಮೊದಲಿಗೆ ನಾನು ಸಾಯುತ್ತೇನೆ ಎಂದು ಭಾವಿಸಿದ್ದೆ. ಆ ವೇಳೆ ನನ್ನನ್ನು ಕಾಪಾಡು ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದೆ. ಆನೆ ನನ್ನನ್ನು ಬಿಟ್ಟಿದ್ದೇ ತಡ ಜೀವ ಬಂದಂತಾಯ್ತು ಎಂದು ಹೇಳಿದ್ದಾರೆ.