ಇದು ಅಪ್ರಾಪ್ತರ ವಿರುದ್ಧದ ಇತರ ಅಪರಾಧಗಳಿಗೂ ಕಠಿಣ ಶಿಕ್ಷೆ ನೀಡುವ ಅಂಶಗಳನ್ನು ಒಳಗೊಂಡಿದೆ. ಮಸೂದೆ ಮಂಡಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ, ಈ ಕರಡು ಪ್ರತಿಯಿಂದ ದೇಶದ 47 ಕೋಟಿ ಜನರು ರಕ್ಷಣೆ ಪಡೆಯಲಿದ್ದಾರೆ. ಕರಡು ಮಸೂದೆಯನ್ನು ಈಗಾಗಲೇ ರಾಜ್ಯಸಭೆ ಅಂಗೀಕರಿಸಿದೆ. ಈ ತಿದ್ದುಪಡಿ ಭಾರತೀಯ ದಂಡ ಸಂಹಿತೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲಿದೆ ಎಂದರು.