ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ರಚಿಸಲಾಗಿದ್ದ 3 ಸದಸ್ಯರ ಸಮಿತಿ ತನ್ನ ವರದಿಯನ್ನು ನಿನ್ನೆಯಷ್ಟೇ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್'ಗೆ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠವು ಇಂದು ಕೈಗೆತ್ತಿಕೊಳ್ಳಲಿದ್ದು, ವಿವಾದಕ್ಕೆ ಇತ್ಯರ್ಥಕ್ಕೆ ಸಂಧಾನ ಮಾರ್ಗವನ್ನೇ ಮುಂದುವರೆಸಬೇಕೋ ಅಥವಾ ವಿಚಾರಣೆ ಮೂಲಕ ತಾನೇ ಇತ್ಯರ್ಥ ಪಡಿಸಬೇಕೋ ಎಂಬುದನ್ನು ನಿರ್ಧರಿಸಲಿದೆ.