ಈ ವಿಚಾರವನ್ನು ಭಾನುವಾರ ಪಾಕಿಸ್ತಾನಕ್ಕೆ ತಿಳಿಸಿದ್ದ ಭಾರತೀಯ ಸೇನೆಯು, 'ಬಿಳಿ ಬಾವುಟ ಹಿಡಿದು ಬನ್ನಿ. ಐದು ಶವಗಳನ್ನು ತೆಗೆದುಕೊಂಡು ಹೋಗಿ, ಅಂತಿಮ ಸಂಸ್ಕಾರ ಮಾಡಿ' ಎಂದು ಸೂಚಿಸಿತ್ತು. ಇದಕ್ಕೆ ಪಾಕಿಸ್ತಾನದ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತ್ರಿಕ್ರಿಯೆ ನೀಡಿರುವ ಪಾಕಿಸ್ತಾನ ಭಾರತೀಯ ಸೇನೆಯಿಂದ ಹತ್ಯೆಗೀಡಾದ ಬ್ಯಾಟ್ ಯೋಧರು ಪಾಕಿಸ್ತಾನ ಸೈನಿಕರಲ್ಲ. ಭಾರತ ವಿಶ್ವಸಮುದಾಯದಿಂದ ಕಾಶ್ಮೀರ ವಿಚಾರವನ್ನು ಇಲ್ಲ ಸಲ್ಲದ ನಾಟಕ ಮಾಡುತ್ತಿದೆ. ಪಾಕಿಸ್ತಾನಿ ಸೇನೆಯ ಯಾವುದೇ ಸೈನಿಕ ಗಡಿ ದಾಟಿ ಹೋಗಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.