ಕಾಶ್ಮೀರಕ್ಕೆ ಸಂಬಂಧಿಸಿದ ಊಹಾಪೋಹಗಳ ಬಗ್ಗೆ ಮಾತನಾಡಿರುವ ರಾಜ್ಯಪಾಲ ಸತ್ಯಪಾಲ್ ಮಲೀಕ್, ಊಹಾಪೋಹಗಳಿಗೆ ಕಿವಿಗೊಡುವುದರ ಬದಲು ಸೋಮವಾರ, ಮಂಗಳವಾರದವರೆಗೂ ಕಾದು ನೋಡಿ, ಜಮ್ಮು-ಕಾಶ್ಮೀರದಲ್ಲಿ ಏನೇ ನಡೆದರೂ ಸಹ ರಹಸ್ಯವಾಗಿ ನಡೆಯುವುದಿಲ್ಲ, ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರ ಬಗ್ಗೆ ಚರ್ಚೆ ನಡೆಯಲಿದೆ, ಆದ್ದರಿಂದ ವದಂತಿಗಳಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.