ಇದೇ ವೇಳೆ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶ ಮಾಡುವ ಕೇಂದ್ರದ ಪ್ರಸ್ತಾವಕ್ಕೆ ಬೆಂಬಲ ಸೂಚಿಸಿದ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಚಿದಂಬರಂ ಅವರು, ಮುಂದೊಂದು ದಿನ ಪಶ್ಚಿಮ ಬಂಗಾಳ ಮತ್ತು ಒಡಿಶಾವನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶ ನಿರ್ಮಿಸುವುದಿಲ್ಲ ಎಂದು ಹೇಗೆ ನಂಬುತ್ತೀರಿ? ಈ ಸರ್ಕಾರ ಬೆಂಬಲಿಸುವ ಮುನ್ನ ನೀವು ಯೋಚಿಸಬೇಕಿತ್ತು ಎಂದರು.