ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಟ್ವೀಟ್ ಮಾಡಿದ ಕಾಂಗ್ರೆಸ್ ನ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಜಮ್ಮು-ಕಾಶ್ಮೀರ ಪುನಾರಚನೆ ಮಸೂದೆಯನ್ನು ನಾನು ಬೆಂಬಲಿಸುತ್ತೇನೆ, ಸಾಂವಿಧಾನಿಕ ಪ್ರಕ್ರಿಯೆ ಮೂಲಕ ಇದನ್ನು ಮಾಡಿದ್ದರೆ ಮತ್ತಷ್ಟು ಸೂಕ್ತವಾಗಿರುತ್ತಿತ್ತು. ಆಗ ಯಾವುದೇ ಆಕ್ಷೇಪಗಳಿಗೆ ಜಾಗವಿರುತ್ತಿರಲಿಲ್ಲ. ಆದರೂ ಕೇಂದ್ರ ಸರ್ಕಾರದ ನಡೆ ದೇಶದ ಹಿತಾಸಕ್ತಿಗೆ ಅನುಗುಣವಾಗಿರುವುದರಿಂದ ಈ ಮಸೂದೆಯನ್ನು ಬೆಂಬಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.