ಆರ್ಟಿಕಲ್ 370 ರದ್ದುಗೊಳಿಸಿದ ರೀತಿಯನ್ನು ಪ್ರಶ್ನಿಸಿದ ಮಮತಾ, ಜಮ್ಮು-ಕಾಶ್ಮೀರ ನಾಯಕರ ಬಿಡುಗಡೆಗೆ ಆಗ್ರಹ

ಆರ್ಟಿಕಲ್ 370 ರದ್ದುಗೊಳಿಸಿರುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳ ನೇತಾರರನ್ನು ಬಿಡುಗಡೆಗೆ ಒತ್ತಾಯಿಸಿದ್ದಾರೆ.
ಆರ್ಟಿಕಲ್ 370 ರದ್ದುಗೊಳಿಸಿದ ರೀತಿಯನ್ನು ಪ್ರಶ್ನಿಸಿದ ಮಮತಾ, ಜಮ್ಮು-ಕಾಶ್ಮೀರ ನಾಯಕರ ಬಿಡುಗಡೆಗೆ ಆಗ್ರಹ
ಆರ್ಟಿಕಲ್ 370 ರದ್ದುಗೊಳಿಸಿದ ರೀತಿಯನ್ನು ಪ್ರಶ್ನಿಸಿದ ಮಮತಾ, ಜಮ್ಮು-ಕಾಶ್ಮೀರ ನಾಯಕರ ಬಿಡುಗಡೆಗೆ ಆಗ್ರಹ
ಆರ್ಟಿಕಲ್ 370 ರದ್ದುಗೊಳಿಸಿರುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳ ನೇತಾರರನ್ನು ಬಿಡುಗಡೆಗೆ ಒತ್ತಾಯಿಸಿದ್ದಾರೆ. 
ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ, 
ಫಾರೂಕ್ ಅಬ್ದುಲ್ಲಾ ಸೇರಿದಂತೆ ಜಮ್ಮು-ಕಾಶ್ಮೀರದ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಿತ್ತು. 
ಮೆಹಬೂಬಾ ಮುಫ್ತಿ, ಅಬ್ದುಲ್ಲಾಗಳು ಭಯೋತ್ಪಾದಕರಲ್ಲ, ಅವರನ್ನು ಪ್ರತ್ಯೇಕಗೊಳಿಸುವುದು ಸೂಕ್ತವಲ್ಲ, ಅವರನ್ನು ಗೃಹ ಬಂಧನದಿಂದ ಮುಕ್ತಗೊಳಿಸಬೇಕೆಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಜಮ್ಮು-ಕಾಶ್ಮೀರ ಪುನಾರಚನೆ ಮಸೂದೆಯ ಬಗ್ಗೆಯೂ ಮಮತಾ ಬ್ಯಾನರ್ಜಿ, ತಮ್ಮಿಂದ ಮಸೂದೆಯನ್ನು ಬೆಂಬಲಿಸುವುದಕ್ಕೂ ಆಗುವುದಿಲ್ಲ, ವಿರೋಧಿಸುವುದೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮೋದಿ ಸರ್ಕಾರ ಆರ್ಟಿಕಲ್ 370 ಯನ್ನು ರದ್ದುಗೊಳಿಸಿದ ರೀತಿ ಹಾಗೂ ವಿಧಾನವನ್ನು ಮಾತ್ರ ತಾವು ಒಪ್ಪುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com