1949 ರ ಡಿಸೆಂಬರ್ 22-23 ರಂದು ರಾತ್ರಿ ಮಸೀದಿಯಲ್ಲಿ ರಾಮನ ವಿಗ್ರಹಗಳನ್ನು ಸ್ಥಾಪಿಸಲಾಯಿತು ಎಂದೂ ನಿರ್ಮೋಹಿ ಅಖಾಡದ ಪರ ವಕೀಲರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಯಾವ ಜಾಗದಲ್ಲಿ ನಿತ್ಯ ಪ್ರಾರ್ಥನೆ ನಡೆಯುವುದಿಲ್ಲವೋ ಅದನ್ನು ಮಸೀದಿ ಎಂದು ಪರಿಗಣಿಸಲು ಸಾಧ್ಯವಿಲ್ಲ, ನಾವು 1934 ರಿಂದಲೂ ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಹಕ್ಕು ಪ್ರತಿಪಾದನೆ ಮಾಡುತ್ತಿದ್ದೆವೆ, ಅಲ್ಲಿ ನಮಾಜ್ ನಡೆಯುತ್ತಿರಲಿಲ್ಲ ಎಂಬುದು ನಿರ್ಮೋಹಿ ಅಖಾಡಾದ ಪರ ವಕೀಲ ಸುಶೀಲ್ ಜೈನ್ ವಾದವಾಗಿದೆ.