ಪೋನ್ ಕರೆಗಳು: ಈ ಮಹತ್ವದ ನಿರ್ಧಾರ ಬೆಂಬಲಿಸುವಂತೆ ವೈಎಸ್ ಆರ್ ಕಾಂಗ್ರೆಸ್, ಬಿಜೆಡಿ, ಬಿಎಸ್ಪಿ ಪಕ್ಷಗಳ ಮುಖಂಡರನ್ನು ಪೋನ್ ಕರೆ ಮಾಡುವ ಮೂಲಕ ಒಪ್ಪಿಸಲಾಗಿದೆ. ವೈಎಸ್ ಆರ್ ಕಾಂಗ್ರೆಸ್ ಮುಖಂಡ ವೈಎಸ್ ಜಗನ್ ಮೋಹನ್ ರೆಡ್ಡಿ, ಬಿಜೆಡಿ ವರಿಷ್ಠ ನವೀನ್ ಪಟ್ನಾಯಕ್ , ಟಿಆರ್ ಎಸ್ ಮುಖಂಡ ಕೆ. ಚಂದ್ರಶೇಖರ್ ರಾವ್, ಬಿಎಸ್ಪಿಯ ಸತೀಶ್ ಮಿಶ್ರಾ ಮೂಲಕ ಪಕ್ಷದ ವರಿಷ್ಠೆ ಮಾಯಾವತಿ ಅವರನ್ನು ಸಂಪರ್ಕಿಸಲಾಗಿದೆ.