ಅದು 1990ರ ದಶಕ. ಭಾರತೀಯ ಜನತಾ ಪಾರ್ಟಿ ದೇಶದ ರಾಜಕೀಯದಲ್ಲಿ ಗಟ್ಟಿಯಾಗಿ ಬೇರೂರಲು ಪ್ರಾರಂಭವಾಗಿತ್ತು. ರಾಮ ಮಂದಿರ ವಿವಾದ, ಹಿಂದುತ್ವದ ಅಜೆಂಡಾ ಇಟ್ಟುಕೊಂಡು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಆಡ್ವಾಣಿ ನೇತೃತ್ವದಲ್ಲಿ ದೇಶಾದ್ಯಂತ ಪ್ರಚಾರ ಮಾಡಿ ಪಕ್ಷವನ್ನು ಬಲಪಡಿಸುವ ಕಾಯಕದಲ್ಲಿ ತೊಡಗಿದ್ದರು. ಮಾಜಿ ಸಚಿವ ದಿವಂಗತ ಪ್ರಮೋದ್ ಮಹಾಜನ್, ಗೋವಿಂದಾಚಾರ್ಯ, ಉಮಾ ಭಾರತಿಯವರಂತೆ ಸುಷ್ಮಾ ಸ್ವರಾಜ್ ಬಿಜೆಪಿಯ ಅಗ್ರನಾಯಕರಲ್ಲಿ ಗುರುತಿಸಿಕೊಂಡರು.