ಅವರ ಕೌಶಲ್ಯ ಮತ್ತು ಸಂಕಷ್ಟದಲ್ಲಿರುವ ಭಾರತೀಯರಿಗೆ ಸಹಾಯ ಮಾಡುವ ಸಾಮರ್ಥ್ಯದ ಬಗೆಗೆ ಹೇಳಿದ ಮೋದಿ , "ಅತ್ಯುತ್ತಮ ಆಡಳಿತಾಧಿಕಾರಿ, ಸುಷ್ಮಾ ಅವರು ನಿರ್ವಹಿಸಿದ ಪ್ರತಿಯೊಂದು ಜವಾಬ್ದಾರಿಯೂ ಉನ್ನತ ಗುಣಮಟ್ಟದ್ದಾಗಿತ್ತು. ಹಾಗೂ ಅವರು ಅದರಲ್ಲಿ ಅತ್ಯ್ನ್ನತ ಕಾಳಜಿಯನ್ನು, ಶ್ರದ್ದೆಯನ್ನೂ ಹೊಂದಿದ್ದರು. ವಿವಿಧ ರಾಷ್ಟ್ರಗಳೊಂದಿಗಿನ ಭಾರತ ಸಂಬಂಧಗಳನ್ನು ಉತ್ತಮಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಚಿವರಾಗಿ ನಾವು ಆಕೆಯ ಸಹಾನುಭೂತಿಯ ಮುಖವನ್ನು ಕಂಡಿದ್ದೇವೆ. ವಿಶ್ವದ ಯಾವುದೇ ಭಾಗದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಪಾಲಿಗೆ ಸುಷ್ಮಾ ಅವರು ಸಹಾಯ ನೀಡದಿರುತ್ತಿರಲಿಲ್ಲ" ಎಂದಿದ್ದಾರೆ.