ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನಾಪಡೆ ಪಾಕಿಸ್ತಾನದ ಬಾಲಕೋಟ್ ನಲ್ಲಿ ಸರ್ಜಿಕಲ್ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಬಳಿಕ ಭಾರತೀಯ ವಾಯುಗಡಿ ದಾಟಿ ಬಂದ ಪಾಕಿಸ್ತಾನದ ಎಫ್- 16 ಯುದ್ಧ ವಿಮಾನ ಜೊತೆಗೆ ಕಾಳಗ ನಡೆಸಿದ್ದ ಅಭಿನಂದನ್ ಅದನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು.