ಶ್ರೀನಗರ: ಆರ್ಟಿಕಲ್ 370 ರದ್ದುಗೊಂಡ ನಂತರ ವಿಧಿಸಲಾಗಿದ್ದ ನಿರ್ಬಂಧವನ್ನು ಜಮ್ಮು ಪ್ರದೇಶದಲ್ಲಿ ಸಂಪೂರ್ಣ ತೆರವುಗೊಳಿಸಲಾಗಿದ್ದು, ಕಾಶ್ಮೀರದ ಕೆಲವೆಡೆ ಮುಂದುವರೆಸಲಾಗಿದೆ.
ಕಾಶ್ಮೀರದ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಜಮ್ಮು-ಕಾಶ್ಮೀರದ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುನೀರ್ ಖಾನ್ ಹೇಳಿದ್ದಾರೆ.
ಕೆಲವರಿಗೆ ಪೆಲೆಟ್ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ, ಕಾಶ್ಮೀರದ ಕೆಲವೆಡೆ ಇನ್ನೂ ಕೆಲವು ಕಾಲ ನಿರ್ಬಂಧ ಮುಂದುವರೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement