ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಕೇಜ್ರಿವಾಲ್ ಸರ್ಕಾರ ಭರ್ಜರಿ ಕೊಡುಗೆ ಪ್ರಕಟಿಸಿದೆ.
ಬೈಯಾ ದೊಜ್ ಹಬ್ಬವಿರುವ ಅಕ್ಟೋಬರ್ 29ರಿಂದ ದೆಹಲಿಯ ಸಾರಿಗೆ ನಿಗಮದ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.
ಛತ್ರಶಾಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ವಿಷಯವನ್ನು ಘೋಷಿಸಿದರು.
ರಕ್ಷಾ ಬಂಧನ್ ದಿನದ ಸಂದರ್ಭದಲ್ಲಿ ಸಹೋದರಿಯರಿಗೆ ಕೊಡುಗೆಯನ್ನು ನೀಡುತ್ತಿದ್ದೇನೆ. ಅಕ್ಟೋಬರ್ 29ರಿಂದ ದೆಹಲಿಯ ಸಾರಿಗೆ ಸಂಸ್ಥೆ ಹಾಗೂ ಸಹವರ್ತಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೇಜ್ರಿವಾಲ್ ಹೇಳಿದರು.
Advertisement