370ನೇ ವಿಧಿ ರದ್ದತಿ: ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಿ ಎಂದ ನ್ಯಾಯಾಲಯ, ವಿಚಾರಣೆ ಮುಂದೂಡಿದ ಸುಪ್ರೀಂ

370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.  ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ ಮೋದಿ ಸರ್ಕಾರ ಹೊರಡಿಸಿದ ಆದೇಶದ ವಿರುದ್ಧ ಅರ್ಜಿದಾರರು ಸಲ್ಲಿಸಿರುವ ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಲಬೇಕು ಎಂದು ನ್ಯಾಯಾಲಯ ಹೇಳಿದೆ.

ಶುಕ್ರವಾರ ವಿಚಾರಣೆಯನ್ನು ಪ್ರಾರಂಭಿಸಿದಾಗ ಅರ್ಜಿದಾರ ಎಂ.ಎಲ್.ಶರ್ಮಾ ಅವರನ್ನು ಉದ್ದೇಶಿಸಿ  ಅವರ ಅರ್ಜಿಗೆ ಯಾವುದೇ ಅರ್ಥವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

'ಇದು ಯಾವ ರೀತಿಯ ಅರ್ಜಿ? ಇದನ್ನು ವಜಾಗೊಳಿಸಬಹುದಿತ್ತು ಆದರೆ ಇದರೊಡನೆ ಇನ್ನೂ ಐದು ಮನವಿಗಳಿದೆಹಾಗಾಗಿ ಇದನ್ನು ಪರಿಗಣಿಸುತ್ತಿದ್ದೇವೆ’

ಸಿಜೆಐ ರಂಜನ್ ಗೊಗೊಯ್ ಶರ್ಮಾ ಅವರ ಅರ್ಜಿ ವಿಚಾರಣೆ ನಡೆಸಲು ಅರ್ಧ ಗಂಟೆ ಕಾಲ ತೆಗೆದುಕೊಂಡಿದ್ದಾರೆ.ಆದರೆ ಈ ಸಂಬಂಧ ಏನನ್ನೂ ಂಆಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಣಿವೆಯಲ್ಲಿನ ಮಾಧ್ಯಮ ನಿರ್ಬಂಧಗಳ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು, 'ಸಂಪರ್ಕಿತ ಇತರ ವಿಷಯಗಳ ಜೊತೆಗೆ ಮಾಧ್ಯಮ ನಿರ್ಬಂಧಗಳ ಕುರಿತು ನಾವು ಗಮನಿಸುತ್ತೇವೆ' ಎಂದು ಹೇಳಿದರು

ನ್ಯಾಯಾಲಯ ಮುಂದಿನ ವಿಚಾರಣೆಗಾಗಿ ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಿಲ್ಲ "ಕಣಿವೆಯಲ್ಲಿ "ಲ್ಯಾಂಡ್‌ಲೈನ್ ಸಂಪರ್ಕಗಳನ್ನು ಪುನಃಸ್ಥಾಪಿಸಲಾಗುತ್ತಿದೆ ಎಂದು ನಾವು ಕಂಡುಕೊಂಡಿದ್ದೇವೆ. ಇಂದು ಜಮ್ಮು ಕಾಶ್ಮೀರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಿಂದ ಕರೆ ಬಂದಿದೆ. ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ತೆಗೆದುಹಾಕುವ ವಿಷಯದಲ್ಲಿ ನಾವು ಸ್ವಲ್ಪ ಸಮಯವನ್ನು ನೀಡಲು ಬಯಸುತ್ತೇವೆ" 

ಕಾಶ್ಮೀರದಲ್ಲಿ  ದಿನದಿಂದ ದಿನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ, ಕ್ರಮೇಣ ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತಿದೆ" ಎಂದು ರಾಜ್ಯಕ್ಕೆ ಮಾಧ್ಯಮ ನಿರ್ಬಂಧಗಳನ್ನು ತೆಗೆದುಹಾಕಬೇಕೆಂದು ಕೋರಿ ಮತ್ತೊಂದು ಅರ್ಜಿಯ ವಿಚಾರಣೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com