ಜಮ್ಮು- ಕಾಶ್ಮೀರ: ಸಂವಿಧಾನದ 370ನೇ ವಿಧಿ ರದ್ದುಗೊಂಡ ನಂತರ ಕಣಿವೆರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಆಡಳಿತ ಕಚೇರಿಗಳ ಕಾರ್ಯಗಳು ಇಂದು ಎಂದಿನಂತೆ ನಡೆದಿದ್ದು, ಮುಂದಿನ ವಾರದಿಂದ ಶಾಲೆಗಳು ಪುನರ್ ಆರಂಭವಾಗಲಿವೆ ಎಂದು ಜಮ್ಮು- ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿ. ವಿ. ಆರ್. ಸುಬ್ರಮಣ್ಯಂ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಬ್ರಮಣ್ಯಂ, ಆಗಸ್ಟ್ 5 ರಿಂದ ನಿರ್ಬಂಧ ಹೇರಿದ ನಂತರ ಯಾವುದೇ ಪ್ರಾಣ ಹಾನಿಯಾಗಿಲ್ಲ ಅಥವಾ ದೊಡ್ಡ ಪ್ರಮಾಣದ ಗಾಯವಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸವಲತ್ತು ಒದಗಿಸುತ್ತಿದ್ದ ಸಂವಿಧಾನದ 370 ನೇ ವಿಧಿ ರದ್ದುಗೊಂಡು ,ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ನಂತರ ನಿರ್ಬಂಧ ಹೇರಲಾಗಿತ್ತು ಎಂದು ತಿಳಿಸಿದರು.
ಜಮ್ಮು- ಕಾಶ್ಮೀರದಲ್ಲಿನ 12 ಜಿಲ್ಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಐದು ಜಿಲ್ಲೆಗಳಲ್ಲಿ ಸರಳ ರೀತಿಯ ನಿರ್ಬಂಧ ಇರುವುದಾಗಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
Advertisement